ಸೆ.18ರಂದು ಸಚಿವ ಎಸ್.ಸುರೇಶ್ ಕುಮಾರ್ ರಿಂದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಪ್ರವಾಸ..

ಮೈಸೂರು, ಸೆಪ್ಟೆಂಬರ್,16,2020(www.justkannada.in) : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಲಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೆ.18ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

jk-logo-justkannada-logo

ಸೆ,18ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿದ್ದು, ಬೆಳಗ್ಗೆ 10.30ಕ್ಕೆ ನಜರ್ ಬಾದ್ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಿರುವ ನಗರ ಕೇಂದ್ರ ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

S.Suresh Kumar-Minister-September-18-Tour-two districts

ಮಧ್ಯಾಹ್ನ 12ಕ್ಕೆ ನಂಜನಗೂಡು ಮಾರ್ಗವಾಗಿ ಚಾಮರಾಜನಗರಕ್ಕೆ ತೆರಳಲಿದ್ದು, ಚಾಮರಾಜನಗರ ತಾಲೂಕಿನ ಕಾಳನಹುಂಡಿ ರಸ್ತೆಯಲ್ಲಿರುವ ಮುಣಚನಹಳ್ಳಿಯಲ್ಲಿರುವ ತೆಂಗು ಸಂಸ್ಕರಣ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 3ಕ್ಕೆ ಗಿರಿಜನರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ(ನಿಯಮಿತ) ಇದರ ರಂಗಸಂದ್ರ ಶಾಖೆಯ ಗೋಡೌನ್ ಮತ್ತು ಮಾರಾಟ ಮಳಿಗೆ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದು, ಸಂ.4ಕ್ಕೆ ಕೊಳ್ಳೇಗಾಲ, ಮಳ್ಳವಳ್ಳಿ, ಮದ್ದೂರು ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪಿ.ಎಂ.ಚಿದಂಬರ ಮಾಹಿತಿ ನೀಡಿದ್ದಾರೆ.

key words ; S.Suresh Kumar-Minister-September-18-Tour-two districts