ನಟಿ ರಾಗಿಣಿ ಬಂಧನ ವಿಚಾರ : ನಟ ಅನಿರುದ್ಧ ಪ್ರತಿಕ್ರಿಯಿಸಿದ್ದು ಹೀಗೆ…?

kannada t-shirts

ಮೈಸೂರು,ಸೆಪ್ಟಂಬರ್,15,2020(www.justkannada.in):  ಸ್ಯಾಂಡಲ್‌ ವುಡ್ ನಟ ನಟಿಯರ ಮೇಲೆ‌ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ ಅವರು, ಡ್ರಗ್ಸ್  ಎನ್ನುವ ಪಿಡುಗು ಪ್ರಪಂಚದಾದ್ಯಂತ ಇದೆ. ಇದು ಕೇವಲ ಸ್ಯಾಂಡಲ್‌ ವುಡ್‌ ನಲ್ಲಿ ಮಾತ್ರ ಅಲ್ಲ. ಎಲ್ಲ‌ ರಂಗದಲ್ಲೂ ಇದೆ ಎಂದರು.jk-logo-justkannada-logo

ವಿಷ್ಣು ಸ್ಮಾರಕ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಮಂಗಳವಾರ ಚಾಲನೆ ನೀಡಿದರು. ಡಾ. ವಿಷ್ಣುವರ್ಧನ್ ಸ್ಮಾರಕ ಶಿಲಾನ್ಯಾಸಕ್ಕೂ ಮುನ್ನ ಪೂಜಾ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ನಟ ಅನಿರುದ್ಧ ಪಾಲ್ಗೊಂಡಿದ್ದರು.

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನ ಪೊಲೀಸರು ಬಂಧಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ನಟ ಅನಿರುದ್ಧ, ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರೋದು ನೋವಿನ ಸಂಗತಿ. ನಾವು ಹಿರಿಯರನ್ನ ಸ್ಪೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಕೆಡಿಸಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಸಾಗಬೇಕಿದೆ ಎಂದು ಕಿವಿಮಾತು ಹೇಳಿದರು.sandalwood-drugs-accused-case-actor-anirudh-mysore

ಸ್ಯಾಂಡಲ್‌ ವುಡ್‌ ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ’ ಎಲ್ಲರದ್ದು. ಎಲ್ಲರೂ ಕೂಡ ಇದೀಗಾ ಸ್ಯಾಂಡಲ್‌ ವುಡ್ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ನಟ ಅನಿರುದ್ಧ ಹೇಳಿದರು.

Key words: Sandalwood -Drugs –Accused-case-actor- anirudh- mysore

website developers in mysore