‘ಸಿಂಹಾದ್ರಿಯ ಸಿಂಹ’ ನಿರ್ಮಾಪಕ ವಿಜಯ್ ಕುಮಾರ್ ನಿಧನ

ಬೆಂಗಳೂರು, ಆಗಸ್ಟ್ 16, 2021 (www.justkannada.in): ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಬಿ.ವಿಜಯ್‌ ಕುಮಾರ್‌ (63 ನಿಧನರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ತಡ ರಾತ್ರಿ ಎದೆ ನೋವು ಕಾಣಿಸಿಕೊಂಡು ನಿಧರಾಗಿದ್ದಾರೆ.

ವಿಷ್ಣುವರ್ಧನ್‌ ಅಭಿನಯದ ‘ಸಿಂಹಾದ್ರಿಯ ಸಿಂಹ’, ‘ಲಯನ್‌ ಗಜಪತಿ ರಾವ್‌’, ‘ಮೌನಗೀತೆ’, ‘ಅವತಾರ ಪುರುಷ’ ಸೇರಿದಂತೆ ಹಲವು ಚಿತ್ರಗಳನ್ನು ಇವರು ನಿರ್ಮಿಸಿದ್ದಾರೆ.

ವಿಜಯ್‌ ಕುಮಾರ್‌ ಅವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಇದ್ದಾರೆ.