ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ಘೋಷಿಸಿದ  ಸಂದೇಶ್ ನಾಗರಾಜ್

ಬೆಂಗಳೂರು, ಅಕ್ಟೋಬರ್,1,2021(www.justkannada.in):  ಜೆಡಿಎಸ್ ಬಿಟ್ಟು ಬಿಜೆಪಿ ಸೇರುವುದಾಗಿ ವಿಧಾನ ಪರಿಷತ್ ಸದಸ್ಯ, ಸಂದೇಶ್ ನಾಗರಾಜ್ ಘೋಷಿಸಿದ್ದಾರೆ.

ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ  ಮಾಧ್ಯಮಗಳ ಜತೆ ಮಾತನಾಡಿದ ಸಂದೇಶ್ ನಾಗರಾಜ್ , ಜೆಡಿಎಸ್ ತೊರೆದು ನಾನು ಬಿಜೆಪಿ ಸೇರುತ್ತೇನೆ. ಜನವರಿ 5ರವರೆಗೆ ನಾನು ಜೆಡಿಎಸ್ ನಲ್ಲಿ ಇರುತ್ತೇನೆ, ಆ ಬಳಿಕ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು. 

ಮಾಜಿ ಸಿಎಂ  ಎಚ್.ಡಿ.ಕುಮಾರಸ್ವಾಮಿ ವಿರುದ್ಧ  ಅಸಮಾಧಾನಗೊಂಡಿದ್ಧ ಸಂದೇಶ್ ನಾಗರಾಜ್ ಅವರು ಕಳೆದ ಒಂದೂವರೆ ವರ್ಷದಿಂದ ಜೆಡಿಎಸ್ ನಿಂದ ದೂರ ಉಳಿದಿದ್ದರು.

Key words: Sandesh Nagaraj –announces- joining -BJP – leaving- JDS