ಸಂಕಷ್ಟದ ಸಮಯದಲ್ಲಿ ವಿಶೇಷ ಸಾಲ ಸೌಲಭ್ಯ ಪ್ರಕಟಿಸಿದ ಎಸ್’ಬಿಐ

kannada t-shirts

ಬೆಂಗಳೂರು, ಮೇ 17, 2020 (www.justkannada.in): ರೈತರು, ಕೃಷಿ ಉದ್ಯಮಿಗಳು ಹಾಗೂ ಗ್ರಾಮೀಣ ಕಸುಬುದಾರರ ತುರ್ತು ನೆರವಿಗಾಗಿ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ ಬಿಐ) ಹಲವು ರೀತಿ ಸಾಲ ಸೌಲಭ್ಯಗಳನ್ನು ಜಾರಿಗೆ ತಂದಿದೆ.

ಈ “ತುರ್ತು ಸಾಲ’ ಸೌಲಭ್ಯವನ್ನು ಪಡೆ ಯಲು ರೈತರು, ಕೃಷಿ ಉದ್ದಿಮೆದಾರರು ಮತ್ತು ಕೃಷಿ ಉದ್ದೇಶಿತ ಸಹಾಯ ಗುಂಪುಗಳು ಅರ್ಹರಾಗಿದ್ದು, ಜೂ.30 ರವರೆಗೆ ಈ ಯೋಜನೆ ಜಾರಿಯಲ್ಲಿರುತ್ತ ದೆ ಎಂದು ಎಸ್‌ಬಿಐ ಪ್ರಕಟಿಸಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದಿದ್ದು, ಶಿಷ್ಟ ಖಾತೆಗಳು(ಸ್ಟಾಂಡರ್ಡ್‌) ಎಂದು ಪರಿಗಣಿಸಲ್ಪಟ್ಟ ಖಾತೆಗಳ ಸಾಲಗಾರರು ತಮ್ಮ ಬಿತ್ತನೆ ಮುಂತಾದ ಕಾರ್ಯಗಳಿಗೆ, ಕೂಲಿ ಪಾವತಿಗೆ ಮತ್ತು ಕೃಷಿ ಉಪಕರಣಗಳ ದುರಸ್ತಿ ಮುಂತಾದ ತುರ್ತು ಹಣಕಾಸು ಅವಶ್ಯಕತೆಗಳಿಗಾಗಿ ಈ ಹೆಚ್ಚುವರಿ ಸಾಲ ಪಡೆಯಲು ಅರ್ಹರಾಗಿರುತ್ತಾರೆ.

ಪ್ರಸಕ್ತ ಸಾಲ ಮಿತಿಯ ಶೇ. 10 ಅಥವಾ ಗರಿಷ್ಠ 2.0 ಕೋಟಿ ರೂ. ವರೆಗೆ ಸಾಲ ಪಡೆಯಲು ಈಗ ಅವಕಾಶವಿದೆ.

website developers in mysore