ಇಂದಿನಿಂದ ಶಾಲೆಗಳು ಆರಂಭ: ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ- ಸಿಎಂ ಬೊಮ್ಮಾಯಿ.

ಬೆಂಗಳೂರು,ಮೇ16,2022(www.justkannada.in): ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗುತ್ತಿದ್ದು ಮಕ್ಕಳ ಶಿಕ್ಷಣಕ್ಕೆ ಪೂರಕ ವಾತಾವರಣೆ ನಿರ್ಮಾಣ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಸಂಬಂಧ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಇಂದಿನಿಂದ ಶಾಲೆಗಳು ಆರಂಭವಾಗುತ್ತಿದೆ. ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ.border-districts-state-covid-negative-test-outside-states-minister-basavaraja-bommai

ಮಕ್ಕಳಿಗೆ ಶಿಕ್ಷಣ ಬಹಳ ಮುಖ್ಯ. ಮಕ್ಕಳಿಗೆ ಪುಸ್ತಕ, ಬಟ್ಟೆ ಎಲ್ಲವನ್ನು ಕೊಡುತ್ತೇವೆ. ಮಕ್ಕಳಿಗೆ  ಪೂರಕ ವಾತಾವರಣ ನಿರ್ಮಿಸುತ್ತೇವೆ ಎಂದರು.

Key words: Schools-start- today-Building-children-education-CM Bommai.