ಕೋಲ್ಕತ್ತಾ ಮ್ಯೂಜಿಯಂನಲ್ಲಿ ಮನಬಂದಂತೆ ಗುಂಡು ಹಾರಿಸಿದ ಭದ್ರತಾ ಸಿಬ್ಬಂದಿ

ಬೆಂಗಳೂರು, ಆಗಸ್ಟ್ 07, 2022 (www.justkannada.in): ಕೋಲ್ಕತ್ತಾದ ಭಾರತೀಯ ವಸ್ತುಸಂಗ್ರಹಾಲಯದಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ.

ಘಟನೆಯಲ್ಲಿ ಸಿಐಎಸ್‌ಎಫ್(ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಕಾನ್‌ಸ್ಟೆಬಲ್‌ ಸಾವನ್ನಪ್ಪಿದ್ದು, ಮತ್ತೋರ್ವ ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಗಾಯಗೊಂಡಿದ್ದಾರೆ.

ಸಿಐಎಸ್‌ಎಫ್ ಬ್ಯಾರಕ್‌ನಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಈತ ತನ್ನ ಸೇವಾ ಆಯುಧವನ್ನು ಬಳಸಿ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾನೆ.

ದೀಗ ಕಾನ್‌ಸ್ಟೆಬಲ್‌ನನ್ನು ಪೊಲೀಸರು ನಿಶ್ಯಸ್ತ್ರಗೊಳಿಸಿ ಆತನನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಕಮಿಷನರ್ ವಿನೀತ್ ಗೋಯಲ್, ಈಗಾಗಲೇ ನಾವು ಆರೋಪಿಯನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.