ಮುರುಘಾ ಶ್ರೀಗಳು ತಾತ್ಕಾಲಿಕವಾಗಿ ಪೀಠ ತ್ಯಜಿಸಿ ಕಾನೂನನ್ನು ಗೌರವಿಸಿ- ಹೆಚ್. ವಿಶ್ವನಾಥ್ ಆಗ್ರಹ.

ಮೈಸೂರು,ಆಗಸ್ಟ್,30,2022(www.justkannada.in):  ಮುರುಘ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ, ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು ತಾತ್ಕಾಲಿಕವಾಗಿ ಪೀಠ ತ್ಯಜಿಸಿ ಕಾನೂನನ್ನ ಗೌರವಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್  ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್,  ಗುರು  ಪರಂಪರೆಯು ಇತಿಹಾಸ ಪ್ರಸಿದ್ಧ ಮಠ. ಮಕ್ಕಳ ಮೇಲಿನ ಲೈಂಗಿಕ ಆರೋಪ ಕೇಳಿ ಬಂದಿರುವುದು ವಿಷಾದದ ಸಂಗತಿ. ಸಿಎಂ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಸ್ವಾಮೀಜಿಗಳ ರಕ್ಷಣೆಗೆ ಸಿಎಂ ಅಥವಾ ಯಡಿಯೂರಪ್ಪ ಅವರು ನಿಲ್ಲಬಾರದು. ವಿದ್ಯಾರ್ಥಿಗಳ ಪೈಕಿ ದಲಿತ ವಿದ್ಯಾರ್ಥಿಯೊಬ್ಬಳಿದ್ದಾಳೆ. ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಬೇಕು. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ .? ಎಂದು ಪ್ರಶ್ನಿಸಿದರು.

ಈ ವಿಷಯದಲ್ಲಿ ಯಾರು ತಲೆ ಹಾಕಬಾರದು..

ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೇಶದಲ್ಲಿ ನಿರ್ಭಯ ಪ್ರಕರಣದ ಬಗ್ಗೆ ಜನರು, ಸಂಘ ಸಂಸ್ಥೆಯವರು ಆಗ್ರಹ ಪಡಿಸಿದ ಬಳಿಕ 2012ರಲ್ಲಿ ಈ ಕಾಯ್ದೆ ಜಾರಿಗೆ ಬಂದಿದೆ. ಪೋಕ್ಸೋ ಕಾಯ್ದೆ ಬಲವಾಗಿ ನಮ್ಮ ಕೈಗೆ ಬಂದಿದೆ. ಇಂತಹ ಕಾಯ್ದೆಯಡಿ  ಗುರುಗಳು  ನಿಂತಿದ್ದಾರೆ. ಈ ಕಾಯ್ದೆಯ ಜೊತೆಗೆ ಮಕ್ಕಳ ಅಪರಾಧೀಕರಣ ಹಾಗೂ ಎಸ್ಸಿಎಸ್ಟಿ ಪ್ರಕರಣದಲ್ಲಿ ದಾಖಲಾಗಬೇಕು. ನಮ್ಮ ನೆಲದ ಕಾನೂನಿನ ಪ್ರಕಾರ ದಾಖಲಾಗಬೇಕು. ಸ್ವಾಮಿಗಳು ಹಾಗೂ ಹೆಣ್ಣು ಮಕ್ಕಳ ಈ ಕೇಸ್ ನಲ್ಲಿ ಯಾರು ತಲೆ ಹಾಕಬಾರದು. ಈ ವಿಷಯದಲ್ಲಿ ಯಾರು ತಲೆ ಹಾಕಬಾರದು ಎಂದು ಹೆಚ್.ವಿಶ್ವನಾಥ್ ಹೇಳಿದರು.

ಪೋಕ್ಸೋ ದಾಖಲಾದ 24 ಗಂಟೆಯೊಳಗೆ ಅಪರಾಧಿಯಾಗುತ್ತಾನೆ. ಐಪಿಸಿ ಪ್ರಕಾರ ಬೇರೆ ಬೇರೆ ಕೇಸ್ ಗಳಾದರೆ  ಅಪಾದಿತ ಆಗುತ್ತಾನೆ. ಆದರೆ ಪೋಕ್ಸೋ ನಲ್ಲಿ ಅಪರಾಧಿ ಎಂದೇ ಪರಿಗಣಿಸಬೇಕು ಎಂದಿದೆ. ಅಪರಾಧಿಯನ್ನ ಅರೆಸ್ಟ್ ಮಾಡಬೇಕು ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ನಾವುಗಳು ಮಧ್ಯ ಪ್ರವೇಶಿಸಿಬಾರದು. ಹೋಮ್ ಮಿನಿಸ್ಟರ್, ಜಿಲ್ಲಾ ಎಸ್ಪಿ ಏನು ಮಾಡುತ್ತಿದ್ದಾರೆ.? ರಕ್ಷಣೆ ಮಾಡುವ ಕೆಲಸವನ್ನ ಯಾರು ಮಾಡಬಾರದು. ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು ಎಂಬುದು ರಾಜ್ಯದ ಜನತೆಯ ಒಕ್ಕೊರಲು ಒತ್ತಾಯವಾಗಿದೆ. ಸ್ವಾಮೀಜಿ ಎಲ್ಲದರೂ ಹೋದರೆ ಪೊಲೀಸರು ಅವರನ್ನ ಬಹಳ ಗೌರವಯುತವಾಗಿ ಕರೆದುಕೊಂಡು ಬರುತ್ತಾರೆ. ಯಾರು ಅಪರಾಧ ಮಾಡಿದ್ದರೋ ಅವರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಿದ್ದಾರೆ. ಚಿತ್ರದುರ್ಗದ ಎಸ್ಪಿಯನ್ನ ಸಸ್ಪೆಂಡ್ ಮಾಡಬೇಕು. ಕಾನೂನು ಮೌನವಾಗಿ ಕುಳಿತರೆ  ಬೇರೆಯವರು ಇಂತಹ ಕೃತ್ಯ ಮಾಡಲು ಮುಂದಾಗುತ್ತಾರೆ. ನಾಡಿನ  ಕಾನೂನಿಗೆ ಗೌರವ ಕೊಡಬೇಕು. ಜಗತ್ತಿನ ಅರಿವೇ ಇಲ್ಲದ ಮಕ್ಕಳ ಮೇಲೆ ಈ ಕೃತ್ಯವಾಗಿದೆ. ಸ್ವಾಮಿಗಳು  ತಮ್ಮ ಪೀಠವನ್ನ ತಾತ್ಕಾಲಿಕವಾಗಿ ತ್ಯಜಿಸಿ ಕಾನೂನಿನನ್ನ ಗೌರವಿಸಿ ಎಂದು ಹೆಚ್.ವಿಶ್ವನಾಥ್ ಒತ್ತಾಯಿಸಿದರು.

ವೋಟ್ ಗಾಗಿ ಸಿದ್ಧರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸುಮ್ಮನಾದ್ರಾ..?

ಸ್ವಾಮೀಜಿಗೆ ಒಂದು ನ್ಯಾಯ, ಸಾಮಾನ್ಯ ಜನರಿಗೆ ಒಂದು ನ್ಯಾಯಾನಾ? ವೋಟ್ ಗಾಗಿ ಸಿದ್ಧರಾಮಯ್ಯ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸುಮ್ಮನಾದ್ರಾ..? ಈ ಪ್ರಕರಣದಲ್ಲಿ  ನ್ಯಾಯ ಸಿಗಲೇಬೇಕು. ಹಾಗಾದ್ರೆ ಸರ್ಕಾರ ಪೋಕ್ಸೋ ಕಾಯ್ದೆಯನ್ನ ನಾವು ಒಪ್ಪಲ್ಲ ಎಂದು ಹೇಳಿಬಿಡಲಿ. ಈ ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆಯುತ್ತೇನೆ. ಇಡೀ ರಾಜ್ಯದ ಮಾನಮರ್ಯಾದೆ  ಹೋಗುತ್ತಿದೆ. ವೋಟ್ ಗಾಗಿ ಸುಮ್ಮನಾಗಿ ಬಿಟ್ಟಿದ್ದೀರಲ್ಲ ಯಾಕೆ. ಚಿಂತಕರು, ಪ್ರಗತಿಪರರು ಏನು ಮಾಡುತ್ತಿದ್ದೀರಿ. ಮಕ್ಕಳ ಆಯೋಗ ಏನು ಮಾಡುತ್ತಿದೆ. ಈ ಘಟನೆಯಲ್ಲಿ ನ್ಯಾಯ ಸಿಗಲಿಲ್ಲವಾದರೆ 2023ರ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೆಚ್.ವಿಶ್ವನಾಥ್ ಎಚ್ಚರಿಕೆ ನೀಡಿದರು.

Key words: sexual Harassment- Muruga shri-mysore-MLC-  H. Vishwanath