‘ವನಸ್ಥಾ ಫುಡ್’ ಪ್ರೊಡಕ್ಟ್ ಬಿಡುಗಡೆ ಮಾಡಿದ ‘ಬಿಗ್ ಬಾಸ್’ ಶೈನ್ ಶೆಟ್ಟಿ

ಬೆಂಗಳೂರು, ಡಿಸೆಂಬರ್ 20, 2020 (www.justkannada.in): ರಾಸಾಯನಿಕ ಮುಕ್ತ, ಕೃತಕ ಬಣ್ಣ, ಸಂರಕ್ಷಕಗಳನ್ನು ಬಳಸದೆ ಗ್ರಾಹಕರ ಆರೋಗ್ಯದ ಕಾಳಜಿಯೊಂದಿಗೆ ನೈಸರ್ಗಿಕವಾಗಿ ಆಹಾರ ಪದಾರ್ಥಗಳು ಹಾಗೂ ಮಸಾಲೆಗಳನ್ನು ಉತ್ಪಾದಿಸುವ ಕರಾವಳಿ ಸೊಗಡಿನ ಸಂಸ್ಥೆ ‘ವನಸ್ಥಾ ಆಗ್ರೋ ಫುಡ್’ ಕೆಲ ಪ್ರೊಡಕ್ಟ್ ಗಳನ್ನು ಬಿಡುಗಡೆ ಮಾಡಿದೆ.

ಬೆಂಗಳೂರು ಮಹಾನಗರದ ರಾಜಭವನ ರಸ್ತೆ, ವಸಂತನಗರದಲ್ಲಿರುವ “ದ ಕ್ಯಾಪಿಟಲ್” ಹೋಟೇಲಿನಲ್ಲಿ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ನಡೆಯಿತು.

ನಾಡಿನಾದ್ಯಂತ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ವನಸ್ಥಾ ಉತ್ಪನ್ನಗಳನ್ನು ಒದಗಿಸುವ ದೃಷ್ಟಿಯಿಂದ ಆಹಾರ – ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಇರುವ ಬಿಗ್_ಬಾಸ್ ಸೀಝನ್-7ರ ವಿಜೇತ ಹಾಗೂ ಉದಯೋನ್ಮುಖ ಚಲನಚಿತ್ರ ನಟ ಶೈನ್ ಶೆಟ್ಟಿ ಅವರನ್ನು ‘ವನಸ್ಥಾ’ ಉತ್ಪನ್ನಗಳ ರಾಯಭಾರಿಯಾಗಿ ನಿಯೋಜಿಸಲಾಗಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಟ ಶೈನ್‌ ಶೆಟ್ಟಿ ಬಳಿಕ ಆಹಾರೋತ್ಪನ್ನಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ರಾಯಭಾರಿಯಾ ಸಂಸ್ಥೆಯೊಂದಿಗಿನ ಒಪ್ಪಂದಕ್ಕೆ ಇಂದು ಸಹಿ ಹಾಕಿದ್ದಾರೆ. ಕಿರುತೆರೆ ನಟಿಯರಾದ ಭೂಮಿ ಶೆಟ್ಟಿ ಮತ್ತು ಚಂದನ ಭಾಗವಹಿಸಿದ್ದರು.

ಅವಧೂತ ಶ್ರೀ ಶ್ರೀ ವಿನಯ ಗುರೂಜಿ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು. “ಫಾಸ್ಟ್‌ ಫುಡ್‌ ಲೈಪ್‌ ನಲ್ಲಿ ಮರೆಯಾಗುತ್ತಿರುವ ಪಾರಂಪರಿಕ ರುಚಿಯನ್ನು ಮತ್ತೆ ಜನರ ಮುಂದೆ ತರುವ ವನಸ್ಥಾ ಸಂಸ್ಥೆಯ ಪ್ರಯತ್ನ ಮೆಚ್ಚುವಂಥದ್ದು. ಸಂಸ್ಥೆಯು ರಾಸಾಯನಿಕ ಮುಕ್ತವಾದಂತಹ ಅನೇಕ ಬಗೆ ಆಹಾರೋತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವುದರಿಂದ ಸಮಾಜದ ಆರೋಗ್ಯದ ದೃಷ್ಟಿಯಿಂದ ಉತ್ತಮ ಕೆಲಸವಾಗಿದೆ’ ಎಂದು ಗುರೂಜಿ ಮೆಚ್ಚುಗೆ ವ್ಯಕ್ತಪಡಿಸಿದರು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ, ಕಂಪೆನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಂಸ್ಥಾಪಕ ಶ್ರೀಯುತ ನಟರಾಜ್ ಕಲ್ಯಾಣಿ, ನಿರ್ದೇಶಕ ರಾಮ್ ಪ್ರದೀಪ್ ಆಚಾರ್, ಆರ್ಥಿಕ ಸಲಹೆಗಾರರಾದ ಆನಂದ ಪಿ. ಎಸ್., ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ವಿಶ್ವಜ್ಞಾಚಾರ್, ಪ್ರಾದೇಶಿಕ ವ್ಯವಸ್ಥಾಪಕ ಧನಂಜಯ್ ನೆಲ್ಯಾಡಿ ಇತರರು ಉಪಸ್ಥಿತರಿದ್ದರು.