JUST KANNADA UPDATE : ಕ್ರಶರ್‍ಗಳ ಪರವಾನಿಗೆ, ಸರ್ಕಾರ ಮರು ಪರಿಶೀಲನೆ ನಡೆಸಲಿದೆ : ಸಿಎಂ ಯಡಿಯೂರಪ್ಪ.

ಶಿವಮೊಗ್ಗ, ಜ.23, 2021 : (www.justkannada.in news) ಗುರುವಾರ ರಾತ್ರಿ ಹುಣಸೋಡು ಕಲ್ಲುಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿ ನೀಡಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಹೇಳಿದಿಷ್ಟು…

 shivamogga-jelitin-blast-cm-yadiyurappa-visits-spot

ಸ್ಫೋಟ ಪ್ರಕರಣದಲ್ಲಿ ಇದುವರೆಗೆ 6 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಹೈದ್ರಾಬಾದ್‍ನಿಂದ ಆಗಮಿಸಿದ ಡೈರೆಕ್ಟರ್ ಆಫ್ ಎಕ್ಸ್‍ಪ್ಲೋಸಿವ್‍ಸ್ ತಂಡ ಈಗಾಗಲೇ ಪ್ರಾಥಮಿಕ ತನಿಖೆಯನ್ನು ಕೈಗೊಂಡಿದೆ. ಸ್ಥಳೀಯವಾಗಿ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಘಟನೆಯ ತನಿಖೆಯನ್ನು ನಡೆಸುತ್ತಿದೆ. ದುರ್ಘಟನೆಯಲ್ಲಿ ಸಾವಿಗೀಡಾದ ಮೃತರ ಕುಟುಂಬಗಳಿಗೆ ಈಗಾಗಲೇ 5ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಘಟನೆಯಲ್ಲಿ ಸ್ಫೋಟಕದ ಬಳಕೆ, ಅದು ಎಲ್ಲಿಂದ ಬಂತು ಸೇರಿದಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುವುದು.

 shivamogga-jelitin-blast-cm-yadiyurappa-visits-spot

ಈ ಪ್ರದೇಶದಲ್ಲಿರುವ ಎಲ್ಲಾ ಕ್ರಶರ್‍ಗಳು ಪರವಾನಿಗೆ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ. ಆದರೆ ಇಲ್ಲಿ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವುದಿಲ್ಲ. ಇದು ಪರಿಸರ ಸೂಕ್ಷ್ಮ ಪ್ರದೇಶವಾಗಿದ್ದು, ಈ ಕುರಿತು ಸರ್ಕಾರ ಮರು ಪರಿಶೀಲನೆ ನಡೆಸಲಿದೆ.
ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ತನಿಖೆಯ ಬಗ್ಗೆ ಸ್ಪಷ್ಟ ಚಿತ್ರಣ ಲಭಿಸಲಿದೆ. ನಿಷ್ಪಕ್ಷವಾದ ತನಿಖೆಯಿಂದ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು

oooo

key words : shivamogga-jelitin-blast-cm-yadiyurappa-visits-spot