ಶಿವಣ್ಣನ ‘ಆರ್’ಡಿಎಕ್ಸ್ ‌ಗೆ ಬೆಂಗಳೂರಲ್ಲಿ ಮುಹೂರ್ತ

ಬೆಂಗಳೂರು, ಫೆಬ್ರವರಿ 19, 2020 (www.justkannada.in): ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಆರ್’ಡಿಎಕ್ಸ್ ‌ಸಿನಿಮಾ ಸೆಟ್ಟೇರಲು ಎಲ್ಲ ಸಿದ್ಧತೆಗಳು ನಡೆದಿದೆ.

ಇಂದು ಸಿನಿಮಾ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು , ಕಂಠೀರವ ಸ್ಟುಡಿಯೋದಲ್ಲಿ ಚಿತ್ರ ಲಾಂಚ್ ಆಗಲಿದೆ .
ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹಾಗೂ ನಟ ಪುನೀತ್ ರಾಜ್ ‍ ಕುಮಾರ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದಾರೆ .

ಸರಳ ಸಮಾರಂಭದ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಗುತ್ತಿದೆ. ಚಿತ್ರಕ್ಕೆ ‘ ಆರ್ ‌ ಡಿಎಕ್ಸ್ ‌’ ಎಂಬ ಶೀರ್ಷಿಕೆ ಇಡಲಾಗಿದೆ.