ಸಿದ್ದಗಂಗಾ ಶ್ರೀಗಳ ಜಯಂತ್ಯುತ್ಸವಕ್ಕಾಗಿ ಶ್ರೀಗಳ ಜೀವನ ಚರಿತ್ರೆ ಸಾರುವ ಸಿನಿ ಸೀರಿಸ್: ಬಾಲಿವುಡ್ ಬಿಗ್ ಬಿ ನಟನೆ ಸಾಧ್ಯತೆ

ಬೆಂಗಳೂರು, ಮಾರ್ಚ್ 30, 2022 (www.justkannada.in): ಸಿದ್ದಗಂಗಾ ಶ್ರೀಗಳ 115 ಜಯಂತ್ಯುತ್ಸವ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ.

ಡಾ. ಹಂಸಲೇಖ ಅವರುಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ. ವಿಶೇಷ ಎಂದರೆ ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯವಾಗಿದೆ.

ಅಮಿತಾಬ್ ಕಾಲ್​ಶೀಟ್​ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ (Kannada) ನಟಿಸಿದಂತೆ ಆಗಲಿದೆ.

‘ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರವನ್ನ ಮಾಡಲು ಈಗಾಗಲೇ ಅಪ್ರೋಚ್ ಮಾಡಲಾಗಿದೆ. ಅವರು ಕಥೆಯನ್ನು ಕೇಳಿದ್ದಾರೆ. ಆದರೆ, ಸದ್ಯ ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋ ಕಾರಣ ಗ್ರೀನ್ ಸಿಗ್ನಲ್​ಗಾಗಿ ಕಾಯುತ್ತಿದ್ದೇವೆ’ ಎಂದು ಹಂಸಲೇಖ ಹೇಳಿದ್ದಾರೆ.