ಕಾಂಗ್ರೆಸ್ ಸೋಲುವ ಸತ್ಯ ಸಿದ್ದರಾಮಯ್ಯಗೆ ಗೊತ್ತಿದೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಟೀಕೆ…

ಹುಮ್ನಾಬಾದ್,ಏಪ್ರಿಲ್,9,2021(www.justkannada.in):  ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತೆ ಎಂಬ ಸತ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದರು.Illegally,Sand,carrying,Truck,Seized,arrest,driver

ಶುಕ್ರವಾರ ಹುಮ್ನಾಬಾದಿನಲ್ಲಿ  ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ,  ಸಿದ್ದರಾಮಯ್ಯ ಅವರು ಈ ಸತ್ಯವನ್ನು ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ.  ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ.  ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಆದರೂ  ಈ ಸತ್ಯವನ್ನು ಮರೆಮಾಚಲು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.Siddaramaiah -knows - truth - defeat - Congress - Home Minister -Basavaraja Bommai

ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಲು ಯಾರೂ ತಯಾರಿಲ್ಲ ಜನತಾದಳ ಮತ್ತು ಎಂಐಎಂ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷ ಗಾಬರಿಯಾಗಿದೆ. 2018 ರ ಚುನಾವಣೆಯಲ್ಲಿ ಎಸ್ಎಫ್ಐ ಮತ್ತು ಎಂಐಎಂ ಸ್ಪರ್ಧೆ ಘೋಷಣೆ ಮಾಡಿದಾಗ ಅವರ ಜೊತೆ ಡಿಲ್ ಮಾಡಿಕೊಂಡವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Key words: Siddaramaiah -knows – truth – defeat – Congress – Home Minister -Basavaraja Bommai