ಈ ಬಾರಿಯೂ ಸರಳ ಮೈಸೂರು ದಸರಾ ಆಚರಣೆ: 6 ಕೋಟಿ ರೂ ಬಿಡುಗಡೆಗೆ ಸಭೆಯಲ್ಲಿ ತೀರ್ಮಾನ.

ಬೆಂಗಳೂರು,ಸೆಪ್ಟಂಬರ್,3,2021(www.justkannada.in):  ಕಳೆದ ಬಾರಿಯಂತೆ ಈ ಬಾರಿಯೂ  ಸರಳ ಮೈಸೂರು ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಆಚರಣೆಗೆ 6 ಕೋಟಿ ರೂ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರು ದಸರಾ ಆಚರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಉನ್ನತಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೊರೋನಾ ಹೋಗಿಲ್ಲ. 3ನೇ ಅಲೆ ಭೀತಿಯಲ್ಲಿದ್ದೇವೆ. ನೆರೆ ರಾಜ್ಯ ಕೇರಳಾದಲ್ಲಿ ಕೊರೋನಾ ಹೆಚ್ಚಳವಾಗಿದೆ. ಹೀಗಾಗಿ ಕಳೆದ ಬಾರಿಯಂತೆಯೇ ಈ ಬಾರಿಯೂ ಸರಳ ದಸರಾ ಆಚರಣೆ ಮಾಡಲಾಗುವುದು ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಮಾತನಾಡಿ, ಅಕ್ಟೋಬರ್ 7 ರಂದು ದಸರಾ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 15 ರಂದು ದಸರಾ ಜಂಬೂ ಸವಾರಿ ನಡೆಯಲಿದೆ. ದಸರಾ ಯಾರು ಉದ್ಘಾಟನೆ ಮಾಡುತ್ತಾರೆ ಎಂಬುದನ್ನ ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸುತ್ತಾರೆ ಎಂದರು.

 

Key words: simple- Mysore Dasara-decision -release – Rs 6 crore– meeting –CM-Basavaraj bommai