ಗಾಯಕ ಎಸ್ ಪಿಬಿ ನಿಧನ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶೋಕಾಚರಣೆ

ಬೆಂಗಳೂರು,ಸೆಪ್ಟಂಬರ್,25,2020(www.justkannada.in): ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯ ನಿಧನರಾದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಶೋಕಾಚರಣೆ ಮಾಡಲು ಘೋಷಣೆ  ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.jk-logo-justkannada-logo

ಇಂದು ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಖ್ಯಾತ ಗಾಯಕ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ನಾಳೆ ಬೆಳಿಗ್ಗೆ 11 ಗಂಟೆಗೆ  ಚೆನ್ನೈನ ತಾಮರೈ ಪಾಕಂನಲ್ಲಿ ನಡೆಯಲಿದೆ. ಈ ನಡುವೆ ನಾಳೆ ಬೆಳಿಗ್ಗೆ 9 ಗಂಟೆವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.singer-s-p-balasubramanyam-death-declaration-mourning-tomorrow

ಇನ್ನು  ನಾಳೆ ರಾಜ್ಯಾದ್ಯಂತ ಶೋಕಾಚರಣೆ ಮಾಡುವುದು ಮತ್ತು ಎಲ್ಲಾ ಸಭೆ ಸಮಾರಂಭಗಳನ್ನು ರದ್ಧು ಮಾಡಲಾಗಿದೆ. ಹಾಗೆಯೇ ರಾಷ್ಟ್ರಧ್ವಜವನ್ನು ಅರ್ಧಕ್ಕಿಳಿಸಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ.

Key words: singer- S P Balasubramanyam- death-Declaration – mourning- tomorrow