ಬಿಜೆಪಿ ಸರ್ಕಾರವನ್ನ ಬೇರು ಸಮೇತ ಕಿತ್ತು ಹಾಕುವವರೆಗೂ ಈ ಪರಿಸ್ಥಿತಿ ಬದಲಾಗಲ್ಲ- ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.

ಬೆಂಗಳೂರು,ಜುಲೈ,28,2022(www.justkannada.in):  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿ ಸರ್ಕಾರವನ್ನ ಬೇರು ಸಮೇತ ಕಿತ್ತು ಹಾಕುವವರೆಗೂ ಈ ಪರಿಸ್ಥಿತಿ ಬದಲಾಗಲ್ಲ ಎಂದು ಗುಡುಗಿದ್ದಾರೆ.

ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಇನ್ನೂ ಎಷ್ಟು ಜನ ಅಮಾಯಕರು ಸಾಯಬೇಕು..?  ಕರಾವಳಿ ಆಯ್ತು, ಶಿವಮೊಗ್ಗ ಆಯ್ತು. ಈಗ ಮುಂದೆ ಎಲ್ಲಿ..? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿದೆ. ಈ ಸರ್ಕಾರದಲ್ಲಿ ಜೀವಕ್ಕೆ ಬೆಲೆ ಇಲ್ಲ. ಇದೇನಾ ನೀವು ಹಿಂದೂ ಧರ್ಮ ಕಾಪಾಡೋದು ಎಂದು ಕಿಡಿಕಾರಿದರು.

ಹಿಂದುತ್ವ ಕಾರ್ಡ್ ನಲ್ಲಿ ಮತ ಪಡೆಯುವ ಲೆಕ್ಕಾಚಾರ ಬಿಜೆಪಿಯದ್ದು. ಸಾವುಗಳಾದರೇ ಅಧಿಕಾರ ಪಡೆಯಬಹುದೆಂಬ ಪ್ಲಾನ್.  ಬಿಜೆಪಿ ಸರ್ಕಾರವನ್ನ ಬೇರು ಸಮೇತ ಕಿತ್ತು ಹಾಕಬೇಕು. ಅಲ್ಲಿವರೆಗೂ ಈ ಪರಿಸ್ಥಿತಿ ಬದಲಾಗಲ್ಲ ಎಂದು ಹೆಚ್.ಡಿಕೆ ಹರಿಹಾಯ್ದರು.

Key words: situation – change – BJP- government –former CM-HD Kumaraswamy