ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಟ್ಯಾಕ್ಟರ್ ಮೇಲಿಂದ ಬಿದ್ದು ಸಾವು.

kannada t-shirts

ಧಾರವಾಡ,ಫೆಬ್ರವರಿ,9,2023(www.justkannada.in): ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಟ್ಯಾಕ್ಟರ್ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲೂಕಿನ ಗರಗ-ಲೋಕೂರ ಕ್ರಾಸ್‌ ನಲ್ಲಿ ಈ ಘಟನೆ ನಡೆದಿದೆ. ನಾಗಪ್ಪ ಉದ್ಮೀಶಿ (27) ಮೃತ ಯೋಧ.  ನಾಗಪ್ಪ ಉದ್ಮೀಶಿ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದವರಾಗಿದ್ದಾರೆ.

ಈ ನಡುವೆ  ಗ್ರಾಮಸ್ಥರೊಂದಿಗೆ ಗರಗ ಮಡಿವಾಳೇಶ್ವರ ಜಾತ್ರೆಗೆ ನಾಗಪ್ಪ ಉದ್ಮೀಶಿ ಬಂದಿದ್ದರು. ಬಳಿಕ ಜಾತ್ರೆ ಮುಗಿಸಿಕೊಂಡು ವಾಪಸ್ಸ್​ ಮರಳುತ್ತಿದ್ದಾಗ ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ನಾಗಪ್ಪ ಉದ್ಮೀಶಿ ಮೃತಪಟ್ಟಿದ್ದಾರೆ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: soldier-fell – tractor – died-darawad

website developers in mysore