ಸೋಮಣ್ಣಗೆ ಯಾವುದೇ ಅಸಮಾಧಾನವಿಲ್ಲ: ಎಲ್ಲವೂ ಸರಿಯಾಗಿದೆ-ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಮಾರ್ಚ್,16,2023(www.justkannada.in): ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಸೋಮಣ್ಣಗೆ ಯಾವುದೇ ಅಸಮಾಧಾನವಿಲ್ಲ. ಎಲ್ಲವೂ ಸರಿಯಾಗಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಚಿವ ಸೋಮಣ್ಣರನ್ನ ಭೇಟಿಯಾಗಿ 3 ತಿಂಗಳು ಆಗಿದೆ. ಸೋಮಣ್ಣರನ್ನ ಕರೆಸಿ ವರಿಷ್ಠರು ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಯಾರನ್ನೂ ಕಡೆಗಣಿಸಿಲ್ಲ ಎಲ್ಲರ ಕೂಡ ಪಕ್ಷಕ್ಕಾಗಿಯೇ ಕೆಲಸ ಮಾಡುತ್ತಿದ್ದಾರೆ.  ಸೋಮಣ್ಣ ವಿಜಯೇಂದ್ರ ಕೂಡ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ವಿಚಾರ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: Somanna – no displeasure-Former CM -BS Yeddyurappa.