ಶ್ರೀಲಂಕಾ ವಿರುದ್ಧ ಸರಣಿ: ಟೀಂ ಇಂಡಿಯಾ ನಾಯಕತ್ವಕ್ಕೆ ಭಾರಿ ಪೈಪೋಟಿ

kannada t-shirts

ಬೆಂಗಳೂರು, ಮೇ 11, 2021 (www.justkannada.in): ಶ್ರೀಲಂಕಾ ವಿರುದ್ಧ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗುತ್ತಿದೆ.

ಹೀಗಾಗಿ ಟೀಂ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ನಾಯಕತ್ವಕ್ಕೆ ಕೆಎಲ್ ರಾಹುಲ್, ಶಿಖರ್ ಧವನ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಈ ಪೈಕಿ ನಾಯಕರಾಗಿ ಕೆಎಲ್ ರಾಹುಲ್ ಗೆ ಹೆಚ್ಚಿನ ಅನುಭವವಿದೆ. ಹೀಗಾಗಿ ಅವರೇ ನಾಯಕರಾಗುವ ಸಾಧ್ಯತೆ ಇದೆ.

ರಿಷಬ್ ಪಂತ್ ಕೂಡಾ ರೇಸ್ ನಲ್ಲಿರಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕರಾಗಿ ಅನುಭವ ಪಡೆದಿರುವ ರಿಷಬ್ ಗೆ ಭವಿಷ್ಯದ ದೃಷ್ಟಿಯಿಂದ ನಾಯಕತ್ವ ಕೊಟ್ಟರೂ ಅಚ್ಚರಿಯಿಲ್ಲ.

website developers in mysore