ಜೆಡಿಎಸ್ ಪಾರ್ಟಿಯಲ್ಲ, ಅದೊಂದು ಕಂಪನಿ ಎಂದ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು, ಅಕ್ಟೋಬರ್ 25, 2021 (www.justkannada.in): ಜೆಡಿಎಸ್ ಪಾರ್ಟಿಯಲ್ಲ, ಅದೊಂದು ಕಂಪನಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಪ್ರಜ್ವಲ್, ನಿಖಿಲ್, ಭವಾನಿ, ಅನಿತಾ ನೀವೇ ಇದ್ರೆ ಅದನ್ನು ಪಕ್ಷ ಅನ್ನಲ್ಲ, ಕಂಪನಿ ಅಂತಾರೆ. ಕುಮಾರಸ್ವಾಮಿ ತಮ್ಮ ಇತಿಮಿತಿ ಅರಿತು ಮಾತನಾಡಲಿ. ಯಾವಾಗಲೂ ಎರಡನೇ ಸ್ಥಾನ ಬಂದಾದ್ರೂ ಸಿಎಂ ಆಗಿದ್ದಾರಾ. ಮೂರನೇ ಸ್ಥಾನ ತೆಗೊಂಡು ಎರಡು ಬಾರಿ ಸಿಎಂ ಆದವರು ನೀವು ಎಂದು ಟೀಕಿಸಿದರು.

ಇನ್ನು ದೇವೇಗೌಡರು ರಾಜ್ಯದಲ್ಲಿ ಅತಂತ್ರ ಸರ್ಕಾರ ಬರೋದಕ್ಕೆ ಕಾರ್ಯ ತಂತ್ರ ರೂಪಿಸುತ್ತಲೇ ಇರುತ್ತಾರೆ ಎಂದು ಜೆಡಿಎಸ್ ಕುರಿತು ಶ್ರೀನಿವಾಸಪ್ರಸಾದ್ ವ್ಯಂಗ್ಯವಾಡಿದರು.

ಊಹಾಪೋಹ: ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಿ ಮಾಡೋದೇನು? ಸಿದ್ದರಾಮಯ್ಯ ಅವರನ್ನುರಾಷ್ಟ್ರ ರಾಜಕಾರಣಕ್ಕೆ ಬನ್ನಿ ಅಂತ ಯಾರೂ ಹೇಳಿಲ್ಲ‌. ಇದೆಲ್ಲಾ ಊಹಾಪೋಹ. ಕಾಂಗ್ರೆಸ್ ದೇಶಾದ್ಯಂತ ನೆಲಕಚ್ಚಿದೆ.
ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಏನು ಮಾಡ್ತಾರೆ ಎಂದು ಸಂಸದ ವಿ ಶ್ರೀನಿವಾಸ ಪ್ರಸಾದ್ ಟೀಕಿಸಿದರು.