ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ.

ಶಿವಮೊಗ್ಗ,ಮಾರ್ಚ್,28,2022(www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು ಈ ನಡುವೆ  ಪರೀಕ್ಷಾ ಕೇಂದ್ರದ ಬಳಿ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿ ಪೋಷಕರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ  ಕುರಿತು ಪ್ರತಿಕ್ರಿಯಿಸಿರುವ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ ವಿದ್ಯಾರ್ಥಿ ಗಳಿಗೆ ಹೆಚ್ಚುವರಿ ಅವಧಿಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Key words: SSLC-exam- center- Honey