ಶಾಲಾ ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ಆಗಿಲ್ಲ- ಸಚಿವ ಮಾಧುಸ್ವಾಮಿ ಸ್ಪಷ್ಟನೆ…

ಬೆಂಗಳೂರು,ನವೆಂಬರ್,12,2020(www.justkannada.in):  ರಾಜ್ಯದಲ್ಲಿ ಶಾಲಾ- ಕಾಲೇಜು ಆರಂಭದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.kannada-journalist-media-fourth-estate-under-loss

ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಮಾಧುಸ್ವಾಮಿ, ಶಾಲಾ- ಕಾಲೇಜು ಆರಂಭದ ಬಗ್ಗೆ  ಸಭೆಯಲ್ಲಿ ಚರ್ಚೆ ಮಾಡಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಶಾಲೆ ಆರಂಭ ಇಲ್ಲ.  ಶಾಲೆ ಆರಂಭದ ಬಗ್ಗೆ ದಿನಾಂಕ ನಿಗದಿಯಾಗಿಲ್ಲ ಎಂದರು.start-school-not-discussed-cabinet-meeting-minister-madhuswamy

ತಜ್ಞರ ಅಭಿಪ್ರಾಯ ಪಡೆದ ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಶಾಲೆ ಆರಂಭದ ಬಗ್ಗೆ ಸಭೆ ನಡೆಸಲಿದ್ದಾರೆ. ಸಭೆ ನಡೆಸಿ ಚರ್ಚಿಸಿದ ಬಳಿಕ ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಸಚಿವ ಮಾಧು ಸ್ವಾಮಿ ಸ್ಪಷ್ಟನೆ ನೀಡಿದರು.

Key words:  start-school -not discussed – Cabinet meeting – Minister-Madhuswamy