ನೆರೆ ಪರಿಹಾರ ಬಿಡುಗಡೆ ಮಾಡಿ ರಾಜ್ಯ ಸರ್ಕಾರದ ಆದೇಶ

kannada t-shirts

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ಭಾರಿ ಮಳೆಯಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಜನರ ನೆರವಿಗೆ ಸರಕಾರ ಧಾವಿಸಿದೆ. ಇಂದು ನೆರೆ ಪರಿಹಾರ ಬಿಡುಗಡೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಮಳೇ ಪ್ರಮಾಣ, ಪ್ರವಾಹದಿಂದ ಜಲಾವೃತಗೊಂಡ ಪ್ರದೇಶ ಹಾಗೂ ಇವುಗಳಿಂದ ಹಾನಿಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹಲವು ನದಿಗಳ ಪ್ರವಾಹ ಪರಿಸ್ಥಿತಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹ ಹಾಗೂ ತೀವ್ರವಾದ ಭೂ ಕುಸಿತ ಉಂಟಾಗಿತ್ತು.

ಪ್ರವಾಹದಿಂದ ನೀರು ನುಗ್ಗಿರುವ ಮನೆಗಳ ಗೃಹೋಪಯೋಗಿ ವಸ್ತುಗಳು ಹಾಗೂ ಬಟ್ಟೆ-ಬರೆ ಹಾನಿಗೆ ಒಟ್ಟು 10 ಸಾವಿರ ರೂ. ಪರಿಹಾರ, ಶೇ. 75 ಕ್ಕಿಂತ ಹೆಚ್ಚು ಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಶೇ. 25-75ರಷ್ಟು ತೀವ್ರ ಮನೆ ಹಾನಿಗೆ 3 ಲಕ್ಷರೂ. ಶೇ. 15-25 ಭಾಗಶಃ ಮನೆ ಹಾನಿಗೆ 50 ಸಾವಿರ ರೂ.ಪರಿಹಾರ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

website developers in mysore