“ರಾಜ್ಯ ಸರ್ಕಾರದ ಏಕಪಕ್ಷೀಯ ನಡೆ ಖಂಡಿಸಿ, ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧಾರ” : ವಿಪಕ್ಷ ನಾಯಕ ಸಿದ್ದರಾಮಯ್ಯ

kannada t-shirts

ಬೆಂಗಳೂರು,ಜನವರಿ,29,2021(www.justkannada.in) : ಬಿಜೆಪಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ಸದನದ ಕಾರ್ಯಕಲಾಪ ಸಲಹಾ ಸಮಿತಿಯು ತನ್ನೆಲ್ಲಾ ಪಾವಿತ್ರ್ಯತೆಯನ್ನು ಕಳೆದುಕೊಂಡು ನಾಮಕಾವಸ್ತೆಗೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.State government-Unilateral-move-Condemn-meetings-Not-participate-Decision-Opposition-leader- Siddaramaiah

 

ರಾಜ್ಯ ಸರ್ಕಾರದ ಏಕಪಕ್ಷೀಯ ನಡೆಯನ್ನು ಖಂಡಿಸುವ ಸಲುವಾಗಿ ಈ ಸಮಿತಿಯ ಮುಂದಿನ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.State government-Unilateral-move-Condemn-meetings-Not-participate-Decision-Opposition-leader- Siddaramaiahರಾಜ್ಯ ಸರ್ಕಾರವು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಿದ ವಿಷಯಗಳನ್ನು, ವಿಧಾನಗಳನ್ನು ಸಂಪೂರ್ಣ ಉಲ್ಲಂಘಿಸಿ, ಏಕಪಕ್ಷೀಯವಾಗಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಇದು ಸದನದ ಕಾರ್ಯಕಲಾಪ ಸಲಹಾ ಸಮಿತಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

key words : State government-Unilateral-move-Condemn-meetings-Not-participate-Decision-Opposition-leader- Siddaramaiah

website developers in mysore