ಬಸ್ ಮೇಲೆ ಕಲ್ಲು ತೂರಾಟ: ಕರ್ನಾಟಕ-ಮಹಾರಾಷ್ಟ್ರ ಮಧ್ಯೆ  ಬಸ್ ಸಂಚಾರ ಸ್ಥಗಿತ….

ಬೆಂಗಳೂರು,ಮಾರ್ಚ್,13,2021(www.justkannada.in): ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಮತ್ತೆ ತಾರಕಕ್ಕೇರಿದ್ದು ಈ  ನಡುವೆ ಎರಡೂ ರಾಜ್ಯಗಳ ನಡುವೆ  ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ.jk

ಹೌದು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮಹಾರಾಷ್ಟ್ರ ಬಸ್ ಮೇಲೆ ಕಲ್ಲುತೂರಾಟ ನಡೆಸಲಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಕಿಚ್ಚು ಹಚ್ಚಲು ಈ ರೀತಿ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗಿದೆ.

stone-bus-between-karnataka-maharashtra
ಕೃಪೆ-internet

ಈ ಹಿನ್ನೆಲೆಯಲ್ಲಿ ಕರ್ನಾಟಕದಿಂದ –ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್  ಗಳು ಸಂಚರಿಸುತ್ತಿದ್ದವು. ಮಹಾರಾಷ್ಟ್ರದಿಂದ ಬೆಳಗಾವಿಗೆ 58  ಬಸ್ ಗಳು ಸಂಚಾರ ನಡೆಸುತ್ತಿದ್ದವು. ಈ ನಡುವೆ ಕೊಲ್ಲಾಪುರದಲ್ಲಿ ಗಲಾಟೆ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: stone – bus- between- Karnataka – Maharashtra