ಕೆಆರ್ ಎಸ್ ಡ್ಯಾಂ ಬಳಿ ಕಲ್ಲು ಕುಸಿತ ವಿಚಾರ: ಸ್ಪಷ್ಟನೆ ನೀಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ.

ಮಂಡ್ಯ,ಜುಲೈ,19,2021(www.justkannada.in): ಕೆಆರ್ ಎಸ್  ಡ್ಯಾಂ ಮೆಟ್ಟಿಲಿನ ಗೋಡೆಯಿಂದ 30ಕ್ಕೂ ಹೆಚ್ಚು ಕಲ್ಲು ಕುಸಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ, ಕಲ್ಲು ಕುಸಿದಿರುವುದಕ್ಕೂ ಡ್ಯಾಂಗೂ ಸಂಬಂಧವಿಲ್ಲ ಎಂದಿದ್ದಾರೆ.jk

ಶ್ರೀರಂಗಪಟ್ಟಣ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ  ಬೆಳ್ಳಂಬೆಳಗ್ಗೆ ಡ್ಯಾಂಗೆ ಭೇಟಿ ನೀಡಿ ಕಲ್ಲು ಕುಸಿದಿರುವ ಸ್ಥಳದಲ್ಲಿ ಪರಿಶೀಲನೆ ನಡೆಸಿದರು.   ಬಳಿಕ ಮಾತನಾಡಿರುವ ಶಾಸಕ ರವೀಂದ್ರ ಶ್ರೀಕಂಠಯ್ಯ, ಡ್ಯಾಂಗೂ, ಕಲ್ಲು ಕುಸಿದಿದ್ದಕ್ಕೂ ಸಂಬಂಧವಿಲ್ಲ. ಗಾರ್ಡನ್ ​ಗೆ ಹೋಗುವ ದಾರಿಯಲ್ಲಿ ಹತ್ತು ಹದಿನೈದು ಕಲ್ಲುಗಳು ಬಿದ್ದಿವೆ. ಇವುಗಳನ್ನ ಮಣ್ಣಿನಿಂದ ಕಟ್ಟಲಾಗಿದ್ದು, ಮಳೆಯಿಂದಾಗಿ ಕಲ್ಲು ಕುಸಿದಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಕ್ರಮ ಗಣಿಗಾರಿಕೆಯಿಂದ ಕೆಆರ್​ಎಸ್​ ಡ್ಯಾಂಗೆ ತೊಂದರೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೆ ಅಣೆಕಟ್ಟಿನ ಸಮೀಪ ಕಲ್ಲುಗಳು ಕುಸಿದಿದ್ದು ಸಾಕಷ್ಟು ಆತಂಕವನ್ನುಂಟು ಮಾಡಿದೆ.

Key words: Stone-collapse- issue – KRS dam-MLA- Ravindra Srikanthaiah