ಹಾವೇರಿ ಜಿಲ್ಲೆ ರಟ್ಟಹಳ್ಳಿಯಲ್ಲಿ  ಮಸೀದಿ, ಮನೆ ವಾಹನಗಳ ಮೇಲೆ ಕಲ್ಲು ತೂರಾಟ: ಬಿಗುವಿನ ವಾತಾವರಣ.

ಹಾವೇರಿ,ಮಾರ್ಚ್,14,2023(www.justkannada.in):  ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಗ್ರಾಮದಲ್ಲಿ  ಮಸೀದಿ ವ್ಯಾನ್, ಆಟೋ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಾರ್ಚ್ 9 ರಂದು  ಹಿಂದೂಪರ ಕಾರ್ಯಕರ್ತರು ನಡೆಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಮಸ್ಲಿಂ ಸಮುದಾಯದ ಯುವಕರು ಅಡ್ಡಿಪಡಿಸಿದ್ದರು ಎನ್ನಲಾಗಿತ್ತು. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆಗೆ ತಡೆಯೊಡ್ಡಿದ್ದನ್ನ ವಿರೋಧಿಸಿ ಇಂದು ಹಿಂದೂ ಕಾರ್ಯಕರ್ತರು ರ್ಯಾಲಿ ನಡೆಸಿದ್ದರು. ಈ ವೇಳೆ ಮಸೀದಿ, ಮನೆ ಮತ್ತು ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಮುಸ್ಲಿಮರ ಮನೆ, ವಾಹನಗಳ ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಹಿಂದೂ ಕಾರ್ಯಕರ್ತರು  ಕಾರು, ಓಮ್ನಿ ಕಾರಿನ ಗ್ಲಾಸ್​​​ ಒಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.  ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Key words: Stone -pelting – mosques-Rattahalli-Haveri district