ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಮಾಲೀಕರ ಮುಷ್ಕರ.

ಬೆಂಗಳೂರು,ಮೇ,30,2022(www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಎರಡು ಬಾರಿ ಟ್ಯಾಕ್ಸ್ ಕಡಿತ ಗೊಳಿಸಿದೆ. ಆದರೆ ಪ್ರತಿ ಬಾರಿ ಮುನ್ನ ಖರೀದಿಸಿಟ್ಟ ತೈಲಕ್ಕೆ ನೀಡಿದ ಟ್ಯಾಕ್ಸ್ ಮರುಪಾವತಿ ಮಾಡಿಲ್ಲ. ಹೀಗಾಗಿ ಪ್ರತೀ ಡೀಲರ್​ಗಳಿಗೆ 7 ರಿಂದ 8 ಲಕ್ಷ ನಷ್ಟವಾಗಿದೆ. ಬೇಡಿಕೆಗೆ ತಕ್ಕಂತೆ ಪೆಟ್ರೋಲ್, ಡಿಸೇಲ್ ಪೂರೈಕೆ ಮಾಡದ ಬಿಪಿಸಿಎಲ್ ಮತ್ತು ಹೆಚ್ಪಿಸಿಎಲ್ ಕಂಪನಿಗಳು ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರಿಂದ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ.

ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ನಡೆಯಲಿದ್ದು, ನಾಳೆ ಪೆಟ್ರೋಲ್ ಡಿಸೇಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಪೆಟ್ರೋಲ್ ಬಂಕ್ ​ನಲ್ಲಿ ಸ್ಟಾಕ್ ಇರುವ ಪೆಟ್ರೋಲ್, ಡಿಸೇಲ್ ಮಾತ್ರ ಪೂರೈಕೆ ಮಾಡಲಾಗುತ್ತದೆ. ಹಾಗಾಗಿ ನಾಳಿನ ಒಂದು ದಿನದ ಮುಷ್ಕರದಿಂದ ಯಾವುದೇ ಸಮಸ್ಯೆ ಆಗೋದಿಲ್ಲ.

ತೈಲ ಕಂಪನಿಗಳು ಮುಂಗಡ ಕಟ್ಟಿದ ಟ್ಯಾಕ್ಸ್ ಮರುಪಾವತಿ ಮಾಡಬೇಕು. ಈ ಹಿನ್ನಲೆ ತೈಲ ಖರೀದಿ ನಿಲ್ಲಿಸಿ ನಾಳೆ ಮುಷ್ಕರ ನಡೆಯಲಿದೆ. ಬೆಂಗಳೂರಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಸಂಪೂರ್ಣ ಬೆಂಬಲ ನೀಡಿದ್ದು, ಶೆಲ್, ನಾಯರಾ ಖಾಸಗಿ ಪೆಟ್ರೋಲಿಯಂ ಕಂಪನಿಗಳೂ ಭಾಗಿಯಾಗಲಿವೆ ಎಂದು ಹೇಳಲಾಗುತ್ತಿದೆ.

Key words: strike -petrol owners- tomorrow -fulfillment -various demands.