ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ…

ಬೆಂಗಳೂರು,ಮಾರ್ಚ್,1,2021(www.justkannada.in):  ಡೆತ್ ನೋಟ್ ಬರೆದಿಟ್ಟು ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.jk

ನಗರದ ವಿವಿ ಪುರಂ ನಲ್ಲಿರುವ ಬಿಐಟಿ ಕಾಲೇಜಿನಲ್ಲೇ ಈ ಘಟನೆ ನಡೆದಿರುವುದು. ಜಯಂತ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಡೆತ್ ನೋಟ್ ಬರೆದಿಟ್ಟು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡಿದ್ಧ ವಿದ್ಯಾರ್ಥಿ ಜಯಂತ್ ರೆಡ್ಡಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.student-suicide-death-note-jumping-college-building-bangalore

ಆದರೆ ಚಿಕಿತ್ಸೆ ಫಲಿಸದೆ ಜಯಂತ್ ರೆಡ್ಡಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ವಿವಿ ಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Key words: Student -suicide – death note – jumping – college building-bangalore