ಪೋಷಕರು ಬೈದಿದ್ದಕ್ಕೆ ಮನನೊಂದು 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು.

ಬೆಂಗಳೂರು,ನವೆಂಬರ್,12,2022(www.justkannada.in):  ಇತ್ತೀಚಿನ ದಿನಗಳಲ್ಲಿ  ಸಣ್ಣಪುಟ್ಟ ವಿಚಾರಗಳಿಗೆ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ಮಧ್ಯೆ ಪೋಷಕರು ಬೈದಿದ್ದಕ್ಕೆ 7 ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 7 ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್(13) ನೇಣಿಗೆ ಶರಣಾದ ಬಾಲಕ. ನಿನ್ನೆ ಸಂಜೆ 7 ಗಂಟೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಪೋಷಕರು ಬೈದಿದ್ದಕ್ಕೆ ಮನೆಯ ಟೆರೇಸ್ ಮೇಲೆ   ಸಾಯಿಕುಮಾರ್ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Key words: student- suicide- parents- scolded