ಬಿಜೆಪಿಗೆ ಬೆಂಬಲ ಘೋಷಿಸಿ ಮುಂಬೈನತ್ತ ತೆರಳಿದ ಪಕ್ಷೇತರ ಶಾಸಕ ಹೆಚ್.ನಾಗೇಶ್…

ಬೆಂಗಳೂರು,ಜು,8,2019(www.justkannada.in):  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಕೈ ಕೊಟ್ಟಿರುವ ಮುಳುಬಾಗಿಲು ಪಕ್ಷೇತರ ಶಾಸಕ ಇದೀಗ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಸಚಿವರಾಗಿ ಇತ್ತೀಚಿಗೆ ಸಣ್ಣ ಕೈಗಾರಿಕೆ ಸಚಿವರಾಗಿ ಸಚಿವ ಸ್ಥಾನ ಸ್ವೀಕರಿಸಿದ್ದ ಹೆಚ್ ನಾಗೇಶ್ ರಾಜಕೀಯ ಮಹತ್ವದ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ತಮ್ಮ ಬೆಂಬಲ ಘೋಷಣೆ ಮಾಡಿದ್ದಾರೆ. ಇಂದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ ಬಳಿಕ ಹೆಚ್. ನಾಗೇಶ್ ಬೆಂಗಳೂರಿನ ಏರ್ ಪೋರ್ಟ್ ಗೆ ತೆರಳಿ ಅಲ್ಲಿಂದ ಮುಂಬೈಗೆ ಹಾರಿದ್ದಾರೆ.

 ಹೆಚ್.ನಾಗೇಶ್ ಅವರು ಮುಂಬೈನಲ್ಲಿ ಅತೃಪ್ತ ಶಾಸಕರ ಜತೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಮುಂಬೈಗೆ ತೆರಳಲು ಬೆಂಗಳೂರು ಏರ್ ಪೋರ್ಟ್ ಆಗಮಿಸಿದ್ದ ವೇಳೆ  ಡಿಸಿಎಂ ಪರಮೇಶ್ವರ್ ಆಪ್ತರು ಹೆಚ್. ನಾಗೇಶ್ ಮನವೊಲಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಅಲ್ಲಿಯೇ ಇದ್ದು ಸಂತೋಷ್  ಹಾಗೂ ಡಿಸಿಎಂ ಪರಮೇಶ್ವರ್ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗುತ್ತಿದೆ.

Key words: Support – BJP-H. Nagesh-Mumbai.