ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆಗೆ ಶರಣು.

ಬೆಂಗಳೂರು,ಸೆಪ್ಟಂಬರ್ ,30,2021(www.justkannada.in): ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಧಾರವಾಹಿ ನಟಿ ಸೌಜನ್ಯ(25) ಆತ್ಮಹತ್ಯೆಗೆ ಶರಣಾಗಿರುವುದು. ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ನಟಿ ಸೌಜನ್ಯ ನೇಣಿಗೆ ಕೊರೊಳೊಡ್ಡಿದ್ದಾರೆ.

ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದ ನಟಿ ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದಾರೆ. ಈ ಕುರಿತು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನನಗೆ ಸಹಾಯ ಮಾಡಿದ ಎಲ್ಲರಿಗೂ ಕ್ಷಮೆ ಕೇಳುತ್ತೇನೆ . ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೊಟ್ ನಲ್ಲಿ ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: surrenders -suicide –bangalore- actor