ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ- ಸಿಎಂ ಬಿಎಸ್ ಯಡಿಯೂರಪ್ಪ….

ಬೆಂಗಳೂರು,ಫೆಬ್ರವರಿ, 22,2021(www.justkannada.in): ಹೆಚ್ಚುವರಿ ಕಾವೇರಿ ನೀರು ಪಡೆಯಲು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲ್ಲ ಈ ಸಂಬಂಧ ಕಾನೂನು ಮಾರ್ಗದ ಮೂಲಕ ಬಿಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳಿದರು.jk

ಈ ಕುರಿತು ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕಾವೇರಿ ನದಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿನ ಯೋಜನೆಗೆ ಅವಕಾಶ ನೀಡುವುದಿಲ್ಲ. ಈ ಸಂಬಂಧ ಕಾನೂನು ಮಾರ್ಗದ ಮೂಲಕ ಬಿಗಿ ಕ್ರಮಕ್ಕೆ ಮುಂದಾಗುತ್ತೇವೆ. ಹಾಗೇ ಹೇಳಿಕೆ ಕೊಡುವುದರಿಂದ ಯಾವ ಪ್ರಯೋಜನವೂ ಆಗೋದಿಲ್ಲ ಎಂದರು. Tamil Nadu -no reason - additional -Kaveri water-CM BS Yeddyurappa.

ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಸಲುವಾಗಿ ತಮಿಳುನಾಡು ಸರಕಾರ ವೈಗೈ ಹಾಗೂ ಗುಂಡಾರು ನದಿಗಳನ್ನ ಜೋಡಿಸುವ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದೆ.

Key words: Tamil Nadu -no reason – additional -Kaveri water-CM BS Yeddyurappa.