ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ: ಓರ್ವ ಶಂಕಿತ ಅರೆಸ್ಟ್…

ಮಂಗಳೂರು,ಡಿಸೆಂಬರ್,3,2020(www.justkannada.in):  ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.logo-justkannada-mysore

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್‌ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಕೆಲ ದಿನಗಳ ಹಿಂದೆ ಗೋಡೆಗಳ ಮೇಲೆ ಉಗ್ರರ ಪರ ಬರಹಗಳನ್ನು ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಶಂಕಿತನನ್ನ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

terrorist-pro-wall-writing-case-mangalore-suspect-arrest

Key words: terrorist-pro-wall writing -case –Mangalore- suspect- Arrest.