ಆತುರದಲ್ಲಿ ಶಾಲೆಗಳ ಆರಂಭಿಸುವ ಚಿಂತನೆ ಇಲ್ಲ- ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್…

ಬೆಂಗಳೂರು,ಅಕ್ಟೋಬರ್,8,2020(www.justkannada.in):  ಕೊರೋನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು ಈ ಮಧ್ಯೆ ಶಾಲೆಗಳ ಆರಂಭ ಕುರಿತು ಭಾರಿ ಚರ್ಚೆಯಾಗುತ್ತಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.jk-logo-justkannada-logo

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ಸುಧಾಕರ್, ಆತುರದಲ್ಲಿ ಶಾಲೆಗಳ ಆರಂಭಿಸುವ ಚಿಂತನೆ ಸರ್ಕಾರಕ್ಕಿಲ್ಲ. ಶಾಲೆ ಆರಂಭದ ಬಗ್ಗೆ ತಜ್ಞರ ಜತೆ ಸಭೆ ನಡೆಸಲಾಗುತ್ತದೆ. ತಜ್ಞರು ವರದಿ ನೀಡಿದ ಬಳಿಕ ಸಿಎಂ  ಜತೆ ಸಭೆ ನಡೆಸಿ ಚರ್ಚಿಸಲಾಗುತ್ತದೆ. ಸಿಎಂ ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.think-starting-schools-minister-dr-k-sudhakar-cm-meeting

ಇನ್ನು ಮುನಿರತ್ನಗೆ ಆರ್.ಆರ್ ನಗರ ಬಿಜೆಪಿ ಟಿಕೆಟ್  ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ.ಕೆ.ಸುಧಾಕರ್, ಶೀಘ್ರದಲ್ಲೇ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ಯಾರಿಗೂ ಅನ್ಯಾಯ ಮಾಡಲ್ಲ. ಅನಂಬಿಕೆ ನನಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: think – starting –schools-minister-Dr. K. Sudhakar-cm-meeting