ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ: ಕಡ್ಡಾಯವಾಗಿ ಆಚರಿಸುವಂತೆ  ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ….

ಬೆಂಗಳೂರು,ಜ,25,2020(www.justkannada.in):  ನಾಳೆ 71ನೇ ಗಣರಾಜ್ಯೋತ್ಸವ ಹಿನ್ನೆಲೆ  ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸುವಂತೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ನಾಳೆ ಭಾನುವಾರ ಹಿನ್ನೆಲೆ. ಭಾನುವಾರದ ರಜೆ ಇದೆ ಎಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನ ಮುಂದೂಡುವಂತಿಲ್ಲ. ನಾಳೆಯೇ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಿಸಬೇಕು. ಮತ್ತು ಕಡ್ಡಾಯವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನ ಇಡಬೇಕು ಎಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ.

Key words: Tomorrow – 71st Republic Day –Celebration- Education Department – all school-colleges