ನಾಳೆ ಕರ್ನಾಟಕ ಬಂದ್: ಬೆಂಗಳೂರಿನ ಸುತ್ತ ಮುತ್ತ ಬಿಗಿ ಪೊಲೀಸ್ ಭದ್ರತೆ…

ಬೆಂಗಳೂರು,ಸೆಪ್ಟಂಬರ್,27,2020(www.justkannada.in):  ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ನಾಳೆ ವಿವಿಧ ರೈತಪರ ಸಂಘಟನೆಗಳು ಕರ್ನಾಟಕ ಬಂದ್ ಕರೆ ನೀಡಲಾಗಿದ್ದು ಈ ಹಿನ್ನೆಲೆ ನಾಳೆ ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.jk-logo-justkannada-logo

ಇಬ್ಬರು ಹೆಚ್ಚುವರಿ ಆಯುಕ್ತರು, 10 ಡಿಸಿಪಿಗಳು,60 ಎಸಿಪಿಗಳು, 140 ಇನ್ಸ್ ಪೆಕ್ಟರ್ಸ್, 300 ಮಂದಿ ಪಿಎಸ್ ಐಗಳು, 1500ಕ್ಕೂ ಹೆಚ್ಚು ಸಿವಿಲ್, ಸಂಚಾರಿ ಪೊಲೀಸರು, 2000 ಕ್ಕೂ ಹೆಚ್ಚು ಕೆಎಸ್ ಆರ್ ಪಿ, ಡಿಎಆರ್ ಪೊಲೀಸ್ ಸಿಬ್ಬಂದಿಗಳನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ.tomorrow-karnataka-bandh-tight-security-bangalore

ನಾಳೆ ರೈತರು ಬೃಹತ್ ಪ್ರತಿಭಟನೆ ನಡೆಸಲಿದ್ದು, ನಗರದ ತುಮಕೂರು ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಹೊಸೂರು ರಸ್ತೆ ಸೇರಿ ಪ್ರಮುಖ ಭಾಗಗಳಲ್ಲಿ ಪೊಲೀಸರು ಆಲರ್ಟ್ ಆಗಿರಲಿದ್ದಾರೆ.

Key words: Tomorrow -Karnataka Bandh-Tight security – Bangalore