ನಾಳೆ ಅರ್ಜಿ ವಿಚಾರಣೆ ಹಿನ್ನೆಲೆ: ಇಂದು ಸಂಜೆ ನವದೆಹಲಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕುಟುಂಬ…

ಬೆಂಗಳೂರು,ಅ,29,2019(www.justkannada.in):  ಇಡಿಯಿಂದ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲೆ ವಿಚಾರಣೆ ನಡೆಸುವಂತೆ ಕೋರಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಹಾಗೂ ಪತ್ನಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಾಳೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ.

ನಾಳೆ ಅರ್ಜಿ ವಿಚಾರಣೆ ಹಿನ್ನೆಲೆ ಇಂದು ಸಂಜೆ ಡಿ.ಕೆ ಶಿವಕುಮಾರ್ ಕುಟುಂಬ ನವದೆಹಲಿಗೆ ತೆರಳಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಈಗಾಗಲೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಹೀಗಾಗಿ ಬೆಂಗಳೂರಿನಲ್ಲೇ ವಿಚಾರಣೆ ನಡಸುವಂತೆ ಕೋರಿ ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ಹೀಗಾಗಿ ಇಂದು ಸಂಜೆ ಡಿಕೆಶಿ ತಾಯಿ ಗೌರಮ್ಮ ಮತ್ತು ಪತ್ನಿ ಉಷಾ ಅವರು ದೆಹಲಿಗೆ ತೆರಳಲಿದ್ದಾರೆ.

Key words: tomorrow- petition- hearing-  Former minister- DK Sivakumar’s -family -New Delhi