ನಾಳೆ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ: ಮೈಸೂರು ನಗರದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ…

ಮೈಸೂರು,ಆ,4,2020(www.justkannada.in):  ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿ ಪೂಜೆ ಹಿನ್ನೆಲೆ. ಮೈಸೂರು ನಗರದಲ್ಲಿ  ನಾಳೆ ಯಾವುದೇ ಕಾರ್ಯಕ್ರಮ ಆಯೋಜಿಸದಂತೆ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ ಅವರು ಆದೇಶ ಹೊರಡಿಸಿದ್ದಾರೆ.tomorrow-ram-mandir-worship-prohibited-mysore

ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆದರೆ ಈ ವೇಳೆ  ಮೈಸೂರಿನಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಸಿಹಿ ವಿತರಣೆ  ಮಾಡದಂತೆ ನಿರ್ಬಂಧ ವಿಧಿಸಲಾಗಿದೆ.tomorrow-ram-mandir-worship-prohibited-mysore

ಜತೆಗೆ ಸಂಭ್ರಮಾಚರಣೆ, ಎಲ್ ಇಡಿ ಬಳಕೆ ಮಾಡಿ ಕಾರ್ಯಕ್ರಮ ವೀಕ್ಷಣೆ  ಮಾಡಲು ಅವಕಾಶವಿಲ್ಲ. ಯಾವುದೇ ಸಭೆ ಸಮಾರಂಭ, ಪ್ರತಿಭಟನೆ, ಬೈಕ್ ರ್ಯಾಲಿ ನಡೆಸದಂತೆ  ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 4 ರ ಮಧ್ಯರಾತ್ರಿ 12 ಗಂಟೆಯಿಂದ ಆಗಸ್ಟ್ 5 ರ ಮಧ್ಯರಾತ್ರಿ 12ವರೆಗೆ ನಿರ್ಬಂಧ ಜಾರಿಯಲ್ಲಿರುತ್ತದೆ.  ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಹೆಚ್ಚು ಜನ ಗುಂಪುಗೂಡದಂತೆ ಈ ಕ್ರಮ ಕೈಗೊಳ್ಳಲಾಗಿದೆ.

Key words: Tomorrow – Ram mandir- worship- Prohibited – Mysore