ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ: ದಾಖಲೆ ಬಿಡುಗಡೆ ಮಾಡುವುದಾಗಿ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿಕೆ…

ಮೈಸೂರು, ಆಗಸ್ಟ್, 26, 2020(www.justkannada.in) ; ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಬಿವೈ ವಿಜಯೇಂದ್ರ ಟ್ರಾನ್ಸ್ ಫರ್ ದಂಧೆಯಲ್ಲಿ ಕೋಟಿಗಟ್ಟಲೇ ವಸೂಲಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪಿಸಿದ್ದಾರೆ.

jk-logo-justkannada-logo

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್,  ಸಿಎಂ ಪುತ್ರ ವಿಜಯೇಂದ್ರ ಅವರು ಎಲ್ಲಾ ಇಲಾಖೆಗಳಲ್ಲೂ ಉಸ್ತುವಾರಿಗಳನ್ನು ಮಾಡಿಕೊಂಡಿದ್ದು, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ. ಇದಕ್ಕಾಗಿ 31 ಜನರ ಗುಂಪು ಕಟ್ಟಿಕೊಂಡಿದ್ದಾರೆ. ಈ 31 ಜನರ ಚಲನವಲನಗಳನ್ನು ಗಮನಿಸಿದ್ದು, ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿದ್ದೇವೆ, ಸೆಪ್ಟೆಂಬರ್ 2 ಅಥವಾ 3ನೇವಾರದಂದು ದೆಹಲಿಯಲ್ಲಿ ವಿಡಿಯೋ, ಆಡಿಯೋ ಜೊತೆಗೆ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

 

ವಿಜಯೇಂದ್ರ ಅವರು ಟ್ರಾನ್ಸ್ ಫರ್ ದಂಧೆಯಲ್ಲಿ ಕೋಟಿಗಟ್ಟಲೇ ಲೂಟಿ ಬಗ್ಗೆ ದಾಖಲೆಗಳಿದ್ದು, ಈ ದಾಖಲೆಗಳನ್ನು ಸೆಪ್ಟೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ಬಿಡುಗಡೆ ಮಾಡಲಾಗುವುದು . ಎಂದು ಲಕ್ಷ್ಮಣ್  ತಿಳಿಸಿದ್ದಾರೆ.

ಅಕ್ರಮದ ಬಗ್ಗೆ ಬಿಜೆಪಿ ಶಾಸಕರಿಂದಲೇ ಪತ್ರ…

ಇನ್ನು ಈ ಅಕ್ರಮದ ಬಗ್ಗೆ ಬಿಜೆಪಿ ಶಾಸಕರೇ ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಈ ಪತ್ರ ಲಭ್ಯವಿದೆ ಎಂದು ಪತ್ರ ಬಿಡುಗಡೆ ಮಾಡಿ ಆರೋಪಿಸಿರುವ ಎಂ. ಲಕ್ಷ್ಮಣ್, ಈ ಪತ್ರದ ಬಗ್ಗೆ ನೀವೆ ತನಿಖೆ ನಡೆಸಿ ಎಂದು ಆಗ್ರಹಿಸಿದ್ದಾರೆ.

Key words ;Transfer-allegation-against-CM’s son-B.Y-Vijayendra-kpcc -Spokesperson-M. Lakshman