ಮೈಸೂರಿನಲ್ಲಿ ಖಾಸಗಿ ಬಸ್‌ ಗಳ ಲಾಭದ ಧೋರಣೆ: ಹೈರಾಣಾದ ಪ್ರಯಾಣಿಕರು…!.

ಮೈಸೂರು,ಏಪ್ರಿಲ್,8,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ರಾಜ್ಯ ಸರ್ಕಾರ ಪರ್ಯಾಯವಾಗಿ ಖಾಸಗಿ ಬಸ್ ಗಳ ವ್ಯವಸ್ಥೆ ಮಾಡಿದೆ. ಆದರೆ ಖಾಸಗಿ ಬಸ್ ಗಳ ಲಾಭದ ಧೋರಣೆಗೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ.Illegally,Sand,carrying,Truck,Seized,arrest,driver

ಹೌದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಖಾಸಗಿ ಬಸ್‌ಗಳ ಲಾಭದ ಉದ್ದೇಶಕ್ಕೆ ಪ್ರಯಾಣಿಕರು ಹೈರಾಣಾಗಿದ್ದಾರೆ.  ಹೆಚ್ಚು ಜನರಿದ್ರೆ ಹೆಚ್ಚು ಬಸ್, ಕಡಿಮೆ‌ ಜನ ಇದ್ರೆ ಬಸ್ಸೆ ಇಲ್ಲ. ಈ ನಿಯಮವನ್ನ ಖಾಸಗಿ ಬಸ್ ಗಳು ಅನುಸರಿಸುತ್ತಿದ್ದು ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.transport employ-strike-mysore- profit-orientation -private buses

ಒಬ್ಬರು,ಇಬ್ಬರು,ನಾಲ್ಕು ಜನರಿದ್ದರೆ ಆ ಮಾರ್ಗಗಳಿಗೆ ಬಸ್ಸೆ ಇಲ್ಲ. ಅತಿ ಹೆಚ್ಚು ಜನ ಓಡಾಡುವ ಮಾರ್ಗಗಳಿಗೆ ಗಂಟೆಗೊಂದು ಬಸ್ ಬಿಡಲಾಗುತ್ತಿದೆ. ಮಾರ್ಗ ಯಾವುದಾದರೂ ಇರಲಿ ಜನ ಮಾತ್ರ ಹೆಚ್ಚು ಇರಬೇಕು. ಇಲ್ಲವಾದ್ರೆ ಆ ಮಾರ್ಗಕ್ಕೆ ಬಸ್ಸನ್ನೆ ಓಡೊಸೋಲ್ಲ. ಇಲ್ಲಿ ಯಾವುದೇ ಅಧಿಕಾರಿಗಳ ನಿಯಂತ್ರಣ ಇಲ್ಲ. ಈ ಮೂಲಕ ಖಾಸಗಿ ಬಸ್ ಚಾಲಕ, ಮಾಲೀಕರು ದರ್ಬಾರ್ ನಡೆಸುತ್ತಿದ್ದು, ಇದರಿಂದಾಗಿ  ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಾದು ಕಾದು ಸುಸ್ತಾದ ಪರಿಸ್ಥಿತಿ ಕಂಡು ಬಂದಿದೆ. ಖಾಸಗಿ ಬಸ್ ಗಳ ಧೋರಣೆಯಿಂದ ಕಂಗಾಲಾಗಿರುವ  ಪ್ರಯಾಣಿಕರು ಖಾಸಗಿ ಬಸ್‌ ಗಿಂತ ಸರ್ಕಾರಿ ಬಸ್‌ ಗಳೇ ವಾಸಿ ಎನ್ನುತ್ತಿದ್ದಾರೆ.

Key words: transport employ-strike-mysore- profit-orientation -private buses