ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಸಾರಿಗೆ ನೌಕರರು ಪೊಲೀಸರ ವಶಕ್ಕೆ…

ಬೆಂಗಳೂರು,ಡಿಸೆಂಬರ್,10,2020(www.justkannada.in):  ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ  ಪರಿಗಣಿಸುವಂತೆ ಆಗ್ರಹಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದರು.Transport workers –protest-detained -police - besiege -vidhanasoudha

ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ  ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಇಂದು ವಿಧಾನಸೌಧಕ್ಕೆ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದ್ದರು. ಈ ಮಧ್ಯೆ ಬೆಳಿಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಿದ್ದ ಸಾರಿಗೆ ನೌಕರರ ಜಾಥ ಫ್ರೀಡಂ ಪಾರ್ಕ್ ತಲುಪಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಸಾರಿಗೆ ನೌಕರರ ಪ್ರತಿಭಟನೆಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈತರು ಸಹ ಬೆಂಬಲ ನೀಡಿದ್ದರು. ಈ ನಡುವೆ ಪ್ರತಿಭಟನಾನಿರತ ಸಾರಿಗೆ ನೌಕರರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ತೆರಳುವಾಗ ಫ್ರೀಡಂ ಪಾರ್ಕ್ ಬಳಿ ಪೊಲೀಸರು ಸಾರಿಗೆ ನೌಕರರನ್ನ ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಕರೆದೊಯ್ದಿದ್ದಾರೆ.

Key words: Transport workers –protest-detained -police – besiege -vidhanasoudha