ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳು ಅಂದರ್…

ಮೈಸೂರು,ಜು,30,2020(www.justkannada.in):  ಯುವಕನನ್ನ ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಕೊಲೆ ಆರೋಪಿಗಳನ್ನ ಮೈಸೂರಿನ ಹೆಬ್ಬಾಳು ಠಾಣೆ ಪೊಲೀಸರು ಬಂಧಿಸಿದ್ದಾರೆ.jk-logo-justkannada-logo

ಕಿರಣ್ (29), ದಿಲೀಪ್ (34) ಬಂಧಿತ ಆರೋಪಿಗಳು. ಇದೇ ಜುಲೈ 21ರಂದು ಹೆಬ್ಬಾಳು ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆಯಲ್ಲಿ ದರ್ಶನ್ (20) ಎಂಬಾತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಸಂಬಂಧ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.two-accused-arrest-murder-case-mysore

ಬಳಿಕ‌ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

Key words: two -accused –arrest- murder case-mysore