ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು.

ವಿಜಯಪುರ,ಡಿಸೆಂಬರ್,15,2022(www.justkannada.in): ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಸಿಂದಗಿ ತಾಲ್ಲೂಕು ಹಂಚಿನಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಂಜು ಹಿತಾರಗೌಡರ(33), ನಾಗರಾಜ ಯಡವಣ್ಣವರ(34) ಮೃತಪಟ್ಟವರು. ಮೃತಪಟ್ಟ ಇಬ್ಬರು ಬೆಳಗಾವಿ ಜಿಲ್ಲೆ ಗೋಕಾಕ್ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಆಶೀಫ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two- died – unknown -vehicle -collided – car.