ತುಮಕೂರು ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ: ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು, ಜನವರಿ 23, 2022 (www.justkannada.in): ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರೈತ ಗೋಪಾಲ ನಾಯ್ಕ್ ಮತ್ತು ಭಿಕ್ಷುಕರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ.

ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

key words: Two killed, more than 10 injured bus accident in tumkur district