ನಾಲೆಗೆ ಕಾರು ಉರುಳಿ ಇಬ್ಬರು ದುರ್ಮರಣ.

ರಾಯಚೂರು,ಆಗಸ್ಟ್,30,2022(www.justkannada.in): ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಡದೂರು ಬಳಿ ನಡೆದಿದೆ. ತುಂಗಭದ್ರಾ ಎಡದಂಡೆಯಲ್ಲಿ ಈ ಘಟನೆ ನಡೆದಿದ್ದು ಚಾಲಕ ಪ್ರಾಣಾಪಯದಿಂದ‌ ಪಾರಾಗಿದ್ದು ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಮೃತರು ಆಂಧ್ರ ಮೂಲದವರಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸಿದ್ದು, ಕಾರು ಹಾಗೂ ದೇಹಗಳನ್ನು ಹೊರಗೆ ತೆಗೆಸಿದ್ದಾರೆ.

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ ಇಬ್ಬರು ಸಾವು

ಮತ್ತೊಂದು ಘಟನೆಯಲ್ಲಿ ಸರ್ಕಾರಿ ಬಸ್ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ  ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕು ಜವಳಗೇರ ಬಳಿ ನಡೆದಿದೆ.  ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಭತ್ತದಗದ್ದೆಗೆ ನುಗ್ಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two people -died – car- fell – canal.