ಇಂದು ತೆಲಂಗಾಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೃಹತ್ Rally

ಬೆಂಗಳೂರು, ಆಗಸ್ಟ್ 21, 2022 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ತೆಲಂಗಾಣದ ಮುನುಗೋಡೆಯಲ್ಲಿ ಬೃಹತ್ ಮೆರವಣಿಗೆ ನಡೆಸಲಿದ್ದು, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದಲ್ಲಿ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಕಷ್ಟಪಡುತ್ತಿದ್ದೇವೆ, ಉಪಚುನಾವಣೆಯ ಪೂರ್ವಭಾವಿಯಾಗಿ ಮುನುಗೋಡಿನಲ್ಲಿ ಅಮಿತ್ ಷಾ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ತಿಳಿಸಿದ್ದಾರೆ.

ಜನರು ಕೆ. ಚಂದ್ರಶೇಖರ್ ಸರ್ಕಾರದ ಬಗ್ಗೆ ಅತೃಪ್ತರಾಗಿದ್ದಾರೆ. ರಾಜ್ಯದಾದ್ಯಂತ ದೌರ್ಜನ್ಯಗಳು ಮತ್ತು ಹಿಂಸಾಚಾರಗಳು ನಡೆಯುತ್ತಿವೆ. ಇಂತಹ ಅಂತಹ ವಾತಾವರಣದಲ್ಲಿ ಜನರು ಭಯಭೀತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುನುಗೋಡೆ ಉಪಚುನಾವಣೆಯಿಂದ ತೆಲಂಗಾಣ ರಾಜಕೀಯ ಬದಲಾಗಲಿದೆ. ಜನರು ಈಗೀನ ಸರಕಾರದ ಬಗ್ಗೆ ಬೇಸರಗೊಂಡಿದ್ದಾರೆ. ತೆಲಂಗಾಣ ಬದಲಾಗಬೇಕೆಂದು ಬಯಸುತ್ತಿದ್ದಾರೆ. ಈ ಬದಲಾವಣೆ ಬಿಜೆಪಿಯಿಂದ ಮಾತ್ರ ಸಾಧಿಸಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.