400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ.

ಚಿಕ್ಕಬಳ್ಳಾಪುರ,ಏಪ್ರಿಲ್,1,2022(www.justkannada.in):  ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು  ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದರು.

ಮುದ್ದೇನಹಳ್ಳಿಯಲ್ಲಿ400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ  ನಿರ್ಮಾಣ ಮಾಡಲಾಗುತ್ತಿದ್ದು ಕೇಂದ್ರ ಸಚಿವ  ಅಮಿತ್ ಶಾ ಅವರು ಹೋಮ ಕುಂಡಕ್ಕೆ ಪುಷ್ಪಾರ್ಚನೆ ಮಾಡಿ ಶಿಲನ್ಯಾಸ ನೆರವೇರಿಸಿದರು.

ಈ ವೇಳೆ ಅಮಿತ್ ಶಾಗೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಎಂಟಿಬಿ ನಾಗರಾಜ್‌, ಡಾ.ಕೆ ಸುಧಾಕರ್‌  ಸಾಥ್ ನೀಡಿದರು.

Key words: Union Minister – Amit Shah –400-bed -multi-specialty- hospital.