ವಾಲ್ಮೀಕಿ ಸಮುದಾಯದ ಪ್ರತಿಭಟನೆಗೆ ಬೆಂಬಲ ನೀಡೀದ ನಟ ಕಿಚ್ಚ ಸುದೀಪ್

ಬೆಂಗಳೂರು:ಜೂ-25:(www.justkannada.in) ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮಿಜಿ ನೇತುತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ನಟ ಕಿಚ್ಚ ಸುದೀಪ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ನಟ ಸುದೀಪ್, ಪರಿಶಿಷ್ಠ ಪಂಗಡದವರಿಗೆ ಶೇ.7.5ರಷ್ಟು ಮಿಸಲಾತಿಗೆ ಒತ್ತಾಯಿಸಿ ಧರಣಿ ನಡೆಯುತ್ತಿದ್ದು, ಸ್ವಾಮೀಜಿ ಹಾಗೂ ಸ್ನೇಹಿತರಿಗೆ ನನ್ನ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಶ್ರೀ ಪರಮಪೂಜ್ಯ ಪ್ರಸನ್ನಾನಂದ ಮಹಾಸ್ವಾಮಿಗಳು 16 ದಿನಗಳಿಂದ ನೂರಾರು ಮೈಲಿ ಪಾದಯಾತ್ರೆ ಮಾಡಿ ಇಂದು ಬೆಂಗಳೂರಿಗೆ ತಲುಪಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯಕ್ಕೋಸ್ಕರ ಒಳ್ಳೆಯ ಉದ್ದೇಶವನ್ನಿಟ್ಟುಕೊಂಡು ಈ ಕೆಲಸ ಮಾಡಿದ್ದಾರೆ. ಇದನ್ನು ಒಂದು ಒಳ್ಳೆಯ ಛಲ ಎಂದರೆ ತಪ್ಪಾಗಲ್ಲ. ಅದಕ್ಕೆ ಸಾವಿರಾರು ಜನ ಹೆಜ್ಜೆಗೆ ಹೆಜ್ಜೆ ಇಟ್ಟು ಒಂದು ಆನೆ ಬಲ ಕೊಟ್ಟಿದ್ದೀರಿ. ಇದಕ್ಕೆ ಸರ್ಕಾರ ಆದಷ್ಟು ಬೇಗ ಸ್ಪಂದಿಸಿ ಒಂದು ಒಳ್ಳೆಯ ಪರಿಹಾರ ನೀಡುತ್ತದೆ ಎಂಬ ನಂಬಿಕೆಯಿಂದೆ. ಸ್ವಾಮಿಗಳು ಹಾಗೂ ಸ್ನೇಹಿತರೇ ನಿಮಗೆ ನನ್ನ ಬೆಂಬಲ ಕೂಡ ಇದೆ ಎಂದು ಹೇಳುತ್ತಾ, ಆ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ನಾನು ನಿಮಗೆ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.

ವಾಲ್ಮೀಕಿ ಸಮುದಾಯದ ಪ್ರತಿಭಟನೆಗೆ ಬೆಂಬಲ ನೀಡೀದ ನಟ ಕಿಚ್ಚ ಸುದೀಪ್

valmiki community protest,actor kichcha sudeep,supports