ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ….

ಮೈಸೂರು,ಆ,7,2020(www.justkannada.in): ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.jk-logo-justkannada-logo

ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಧರಣಿ ನಡೆಯಿತು.  ಸಮಗ್ರ ಶಿಶು ಅಭಿತ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಖಾಯಂಗೊಳಿಬೇಕು. ಇದರ ಜೊತೆ ಕನಿಷ್ಠ 21 ಸಾವಿರ ವೇತನ ನೀಡಬೇಕು. ಮಾಸಿಕ ಪಿಂಚಣಿಯಾಗಿ 10 ಸಾವಿರ ಜೊತೆಗೆ ಇಎಸ್ ಐ, ಪಿಎಫ್ ನೀಡಬೇಕು. ಆರೋಗ್ಯದ ರಕ್ಷಣೆಗೋಸ್ಕರ ಶಾಸನವನ್ನ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.various-demand-fulfilment-protest-anganwadi-asha-woker-mysore

ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲರಿಗೂ ಸುರಕ್ಷಾ ಸಾಧನಗಳನ್ನ ನೀಡಬೇಕು. ಕೊರೊನಾ ಸೇವೆಯ ಸಂದರ್ಭದಲ್ಲಿ ಮೃತಪಟ್ಟವರಿಗೆ 50 ಲಕ್ಷ ರೂ ವಿಮೆ ನೀಡಬೇಕೆಂದು ಆಗ್ರಹಿಸಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತೆಯರ ಪ್ರತಿಭಟನೆಗೆ ಎಐಟಿಯುಸಿ, ಸಿಐಟಿಯು ಸಂಘಟನೆಗಳು ಸಾಥ್ ನೀಡಿದವು.

Key words: Various -demand – fulfilment-Protest -Anganwadi – Asha woker- mysore